ವಿಟ್ಲ: ಮಲಗಿದಲ್ಲೇ ವ್ಯಕ್ತಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್!!

ವಿಟ್ಲ ಫೆ.27 : ಇಲ್ಲಿನ ಇಡ್ಕಿದು ಕುಮೇರು ಎಂಬಲ್ಲಿ ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಮೃತಪಟ್ಟ ವ್ಯಕ್ತಿ. ಅರವಿಂದ ಅವರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಪ್ರಕರಣದ ಆರೋಪಿಗಳು. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಅರವಿಂದ ಭಾಸ್ಕರ ಅವರ ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ರಘುನಾಥ ಎಂಬವರು ನೀಡಿದ ದೂರಿನ ಪ್ರಕಾರ, ಫೆ. 26ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ತಂದೆಯವರಿಗೆ ಕರೆ ಮಾಡಿದ ಆಶಾ, ಪತಿ ನಿನ್ನೆ ರಾತ್ರಿ 10 ಗಂಟೆಗೆ ಕೋಣೆಯಲ್ಲಿ ಮಲಗಿದ್ದು, ಬೆಳಗ್ಗಿನ ಜಾವ 7.30 ಸುಮಾರಿಗೆ ನೋಡುವಾಗ ಪತಿ ಏಳುತ್ತಿಲ್ಲ, ಮನೆಗೆ ಬನ್ನಿ ಎಂದು ತಿಳಿಸಿದ್ದಾಳೆ. ಬಳಿಕ ಮನೆಯಲ್ಲಿ ಮಲಗಿದಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಅರವಿಂದ ಭಾಸ್ಕರ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದ ವಿಚಾರ ತಿಳಿದು ಅಲ್ಲಿಗೆ ಹೋದಾಗ ವೈದ್ಯರು ಅರವಿಂದ ಭಾಸ್ಕರನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೃತದೇಹದ ಸ್ಥಿತಿಗತಿಯನ್ನು ಪರಿಶೀಲಿಸಿದಾಗ ಕುತ್ತಿಗೆಯನ್ನು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ ಎಂದು ತಿಳಿಸಲಾಗಿದೆ.

ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ ಗೌಡ ನಿರ್ವಹಿಸುತ್ತಿದ್ದ, ಆತ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ತುಂಬಾ ಅನ್ಯೋನ್ಯವಾಗಿದ್ದ. ಅರವಿಂದ ಭಾಸ್ಕರ ಅವರು ಅಡಿಕೆ ಮಾರಾಟ ಮಾಡಿ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದುದಲ್ಲದೇ, ಯೋಗೀಶ, ಆಶಾ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು. ಇದರಿಂದ ಹೆದರಿ ರಾತ್ರಿ ವೇಳೆಯಲ್ಲಿ ಮನೆಯ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿ ಮಲಗುತ್ತಿರುವ ಬಗ್ಗೆ ಸುಮಾರು 1 ತಿಂಗಳ ಹಿಂದೆ ತಿಳಿಸಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!