ರಾಜ್ಯದ ಎಲ್ಲಾ ಕ್ವಾರಿಗಳ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈ ಕೋರ್ಟ್ ಸೂಚನೆ

ಬೆಂಗಳೂರು: ಶಿವಮೊಗ್ಗದ ಕಲ್ಲು ಕ್ವಾರಿಯಲ್ಲಿ ನಡೆದ ಸ್ಪೋಟ ಪ್ರಕರಣ ಹಾಗೂ ತುಮಕೂರಿನಲ್ಲಿ ನಡೆದ ಜಿಲೆಟಿನ್ ಕಡ್ಡಿ ಸ್ಪೋಟದ ಬಳಿಕ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ರಾಜ್ಯದ ಎಲ್ಲಾ ಕಲ್ಲುಕ್ವಾರಿಗಳ ಸರ್ವೆ ನಡೆಸಿ, 1 ತಿಂಗಳೊಳಗೆ ವರದಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಪ್ರಕರಣೆಯೊಂದರ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು, ರಾಜ್ಯದ ಎಲ್ಲಾ ಕಲ್ಲುಕ್ವಾರಿಗಳ ಸರ್ವೆ ನಡೆಸಿ, ಒಂದು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದರ ಜೊತೆಗೆ ಕಲ್ಲು ಕ್ವಾರಿಯಿಂದಾಗಿ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್ ಕ್ವಾರಿಗಳಲ್ಲಿ ನಿಯಮ ಪಾಲಿಸಲಾಗುತ್ತಿದೆಯೇ.? ನಿಯಮ ಪಾಲಿಸದ ಕ್ವಾರಿಗಳ ಮೇಲೆ ಕ್ರಮವೇನು ಕೈಗೊಳ್ಳಲಾಗುತ್ತಿದೆ ಎಂಬುದಾಗಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಹೈಕೋರ್ಟ್ ವಿಭಾಗೀಯ ಪೀಠಕ್ಕೆ ರಾಜ್ಯದಲ್ಲಿರುವಂತ ಕಲ್ಲುಕ್ವಾರಿಗಳ ಬಗ್ಗೆ ಸರ್ವೇ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು. ಹೀಗಾಗಿ ರಾಜ್ಯದಲ್ಲಿನ ಕಲ್ಲುಕ್ವಾರಿಗಳ ಬಗ್ಗೆ ಸರ್ವೆ ನಡೆಸಿ, ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದಂತ ನ್ಯಾಯಪೀಠವು, ಮಾರ್ಚ್ 8 ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Leave a Reply

Your email address will not be published. Required fields are marked *

error: Content is protected !!