ನಿಟ್ಟೆ: ಭದ್ರತಾ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ

ಕಾರ್ಕಳ, ಫೆ.27 : ತಾಲೂಕಿನ ನಿಟ್ಟೆಯ ಜ್ಯುವೆಲ್ಲರ್ಸ್ ಅಂಗಡಿಯೊಂದರ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಬೆಲೆಬಾಳುವ ಬೆಳ್ಳಿ ವಸ್ತುಗಳನ್ನು ಕಳವು ಗೈದು ಪರಾರಿಯಾಗಿರುವ ಘಟನೆ ಡನೆದಿದೆ.

ಅಖಿಲೇಶ್ ಮಾಲೀಕತ್ವದ ಆರಾಧ್ಯ ಜ್ಯುವೆಲ್ಲರ್ಸ್ ನಲ್ಲಿ ಕಳ್ಳತನ ನಡೆದಿದೆ. ನಿನ್ನೆ ತಡರಾತ್ರಿ 2 ಗಂಟೆಗೆ ಸುಮಾರಿಗೆ ಕಳ್ಳರು ಅಂಗಡಿಗೆ ಟಿಪ್ಪರ್ ಅಡ್ಡ ಇಟ್ಟು ಅನಂತರ ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ ಮುಖಕ್ಕೆ ಮುಸುಕು ಹಾಕಿಕೊಂಡು ಜ್ಯುವೆಲ್ಲರಿಯ ಶಟರ್ ನ ಬೀಗ ಮುರಿದು ಒಳಗೆ ನುಗ್ಗಿ 20,000 ರೂ ಮೌಲ್ಯದ 260 ಗ್ರಾಂ ತೂಕದ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿಕೊಂಡು ಪರರಾರಿಯಾಗಿದ್ದಾರೆ.

ಕೃತ್ಯದ ಬಗ್ಗೆ ಅನುಮಾನಗೊಂಡ ಸ್ಥಳೀಯ ಅಂಗಡಿಯ ಸೆಕ್ಯೂರಿಟಿ ಗಾರ್ಡ್ ಘಟನಾ ಸ್ಥಳದತ್ತ ಹೋದಾಗ ದುಷ್ಟರ್ಮಿಗಳು ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಎಸ್.ಐ ತೇಜಸ್ವಿ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!