ಬ್ರಹ್ಮಾವರ: ಎದೆ ನೋವಿನಿಂದ ಶಾಲಾ ಮುಖ್ಯೋಪಾಧ್ಯಾಯ ನಿಧನ

ಬ್ರಹ್ಮಾವರ ಫೆ.27(ಉಡುಪಿ ಟೈಮ್ಸ್ ವರದಿ): ಎದೆ ನೋವಿನಿಂದ ಅಸ್ವಸ್ಥಗೊಂಡು ಪೆರ್ಡೂರು ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಮೃತಪಟ್ಟಿದ್ದಾರೆ.

ಉಪ್ಪೂರು ಗ್ರಾಮದ ನಿವಾಸಿ ಪೆರ್ಡೂರು ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಲೋಕೇಶ್ವರಾಚಾರಿ ಕೆ.ಪಿ. (57) ಮೃತಪಟ್ಟವರು.

ಇಂದು ಬೆಳಗ್ಗಿನ ಜಾವ 3 ಗಂಟೆಯ ಸುಮಾರಿಗೆ ಲೋಕೇಶ್ವರಾಚಾರಿ ಕೆ.ಪಿ. ರವರು ಮನೆಯಲ್ಲಿ ಮಲಗಿದ್ದವರು ಮಾತನಾಡದೇ ಉಸಿರಾಡಲು ಕಷ್ಟಪಡುತ್ತಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರಿನಲ್ಲಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪರೀಕ್ಷಿಸಿ ಲೋಕೇಶ್ವರಾಚಾರಿ ಕೆ.ಪಿ. ರವರು ಈಗಾಗಲೇ ಮಾರ್ಗ ಮಧ್ಯೆದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಲೋಕೇಶ್ವರಾಚಾರಿ ಕೆ.ಪಿ. ರವರಿಗೆ ಸುಮಾರು 10 ವರ್ಷಗಳಿಂದ ಸಕ್ಕರೆ ಖಾಯಿಲೆ ಇದ್ದು ಈ ಬಗ್ಗೆ ಮಾತ್ರೆಗಳನ್ನು ಸೇವಿಸುತ್ತಿದ್ದರು. ಅವರು ಎದೆನೋವಿನ ಸಮಸ್ಯೆಯಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಪತ್ನಿ ಶಶಿಕಲಾ ಕೆ. ನೀಡಿದ ಮಾಹಿತಿಯಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!