ಕೋಟ: ಎದೆನೋವಿನಿಂದ ಕೂಲಿ ಕಾರ್ಮಿಕ ಮೃತ್ಯು

ಕೋಟ ಫೆ.27 (ಉಡುಪಿ ಟೈಮ್ಸ್ ವರದಿ): ಕುಂದಾಪುರದ ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ ನಿವಾಸಿ ಕೂಲಿ ಕಾರ್ಮಿಕರೊಬ್ಬರು ಎದೆ ನೋವಿನಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆಯ ನಂದಿಕೆಶ್ವರ ದೇವಸ್ಥಾನದ ಬಳಿ ನಿವಾಸಿ ನರಸಿಂಹ ಮೃತಪಟ್ಟವರು. ಇವರು ಇಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋದವರು 9:00 ಗಂಟೆಗೆ ವಾಪಾಸು ಮನೆಗೆ ಬಂದು ಎದೆ ನೊವು ಎಂದು ಮನೆಯವರಲ್ಲಿ ಹೇಳಿದ್ದರು. ಆಗ ಮನೆಯವರು ಅವರನ್ನು ಅಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ನರಸಿಂಹ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಸಂಬಂಧಿ ಸಂತೋಷ್ ಎಂಬವರು ನೀಡಿದ ಮಾಹಿತಿಯಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!