ವಾಟರ್ ಹೀಟರ್ ಕಾಯಿಲ್ ನಿಂದ ಕರೆಂಟ್ ಶಾಕ್- ತಾಯಿ,ಮಗು ಮೃತ್ಯು

ಬೆಂಗಳೂರು ಫೆ.28 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ವಾಟರ್ ಹೀಟರ್‌ನಿಂದಾಗಿ ವಿದ್ಯುತ್ ಶಾಕ್ ತಗುಲಿ ತಾಯಿ ಹಾಗೂ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ರಾಯಚೂರು ಮೂಲದ ಜ್ಯೋತಿ ಹಾಗೂ ಆಕೆಯ 4 ವರ್ಷದ ಮಗು ಜಯಾನಂದ್ ವಿದ್ಯುತ್ ಶಾಕ್‌ನಿಂದ ಮೃತಪಟ್ಟವರು.

ತನ್ನ ಗಂಡ ಹಾಗೂ ಮಗನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನೆಲೆಸಿದ್ದ ಜ್ಯೋತಿ ಅವರು  ಫೆ.26 ರಂದು ಮಧ್ಯಾಹ್ನ ಸ್ನಾನಗೃಹದಲ್ಲಿ ನೀರು ಬಿಸಿ ಮಾಡಲು ಇಟ್ಟಿದ್ದ ವಾಟರ್ ಹೀಟರ್‌ನಿಂದ ಬಾಲಕ ಜಯಾನಂದ್‌ಗೆ ಕರೆಂಟ್ ಶಾಕ್ ತಗುಲಿತ್ತು. ಮಗುವಿಗೆ ಶಾಕ್ ತಗುಲಿ ಒದ್ದಾಡುತ್ತಿರುವುದನ್ನು ಕಂಡ ಜ್ಯೋತಿ ಆತನನ್ನು ಕಾಪಾಡಲು ಮುಂದಾದಾಗ ಆಕೆಗೂ ಕರೆಂಟ್ ಶಾಕ್ ತಗುಲಿದೆ. ಇದರಿಂದ ತಾಯಿ ಹಾಗೂ ಮಗು ಇಬ್ಬರೂ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!