ಮಂಗಳೂರು: ಸ್ಪರ್ಧೆಯಲ್ಲಿ ಗೆದ್ದ ಸಂಭ್ರಮದ ಬೆನ್ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಮಂಗಳೂರು ಫೆ.28 : ಇಲ್ಲಿನ ಜೆಪ್ಪುವಿನಲ್ಲಿ ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಕುಶಲನಾಥ ಶೆಟ್ಟಿ (50) ಮೃತ ಮಟ್ಟವರು. ಇವರು ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!