ರಜತ ಸಂಭ್ರಮದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘ- ಡಾ.ವೀರೇಂದ್ರ ಹೆಗಡೆಯವರಿಂದ ಮನವಿ ಪತ್ರ ಬಿಡುಗಡೆ

ಉಡುಪಿ ಫೆ.28 (ಉಡುಪಿ ಟೈಮ್ಸ್ ವರದಿ) : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಮನವಿ ಪತ್ರದ ಬಿಡುಗಡೆ ಕಾರ್ಯಕ್ರಮ ಧರ್ಮಸ್ಥಳದಲ್ಲಿ ನಡೆಯಿತು.

 ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾl ವೀರೇಂದ್ರ ಹೆಗ್ಗಡೆ ಅವರು ನಿನ್ನೆ  ಮನವಿ ಪತ್ರವನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವದ ಸಂಚಾಲಕ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ್ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಸದಸ್ಯ ಪುಂಡಲೀಕ ಮರಾಠೆ ಇದ್ದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಆಚರಿಸುತ್ತಿದ್ದು, ಕಾರ್ಯಕ್ರಮದಂಗವಾಗಿ ಜಿಲ್ಲೆಯಾದ್ಯಂತ ವಿವಿಧ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ, ಕಟ್ಟಡ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ಸುಮಾರು 2 ಕೋ. ರೂ ಯೋಜನೆ ರೂಪಿಸಲಾಗಿದೆ. ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾl ಹೆಗ್ಗಡೆ ಪೂರ್ಣ ಸಹಕಾರದ ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!