ಉಡುಪಿ: ಮಾ.3- ಕಡಿಯಾಳಿ ದೇವಳಕ್ಕೆ ಶೃಂಗೇರಿ ಶ್ರೀ ಭೇಟಿ

ಉಡುಪಿ ಫೆ.28 (ಉಡುಪಿ ಟೈಮ್ಸ್ ವರದಿ): ತಾಲೂಕಿನ ಸುಮಾರು 1500 ವರ್ಷಗಳ ಇತಿಹಾಸವಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲಕ್ಕೆ ಮಾ.3 ರಂದು ಸಂಜೆ 4 ಗಂಟೆಗೆ  ಶೃಂಗೇರಿ ಶ್ರೀಗಳು ಭೇಟಿ ನೀಡಲಿದ್ದಾರೆ.

ಕಡಿಯಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ ವಿ ಆಚಾರ್ಯ ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಸಂಜೆ 4 ಗಂಟೆಗೆ ದೇವಸ್ಥಾನಕ್ಕೆ ಭೇಟಿ ನೀಡಲಿರುವ ದಕ್ಷಿಣಾಮ್ನಯ ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀ ಮಜ್ಜಗದ್ಗುರು, ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ತತ್ಕರಕಮಲ ಸಂಜಾತರಾದ ಶ್ರೀ ಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸ್ವಾಮಿ ಅವರನ್ನು ಕಡಿಯಾಳಿ ಮುಖ್ಯರಸ್ತೆಯಿಂದ ಸ್ವಾಗತಿಸಿ ಕಡಿಯಾಳಿ ರಿಕ್ಷಾ ನಿಲ್ದಾಣದ ಬದಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ವೈಭವದ ಮೆರವಣಿಗೆಯ ಮೂಲಕ ಕಡಿಯಾಳಿ ದೇಗುಲಕ್ಕೆ ಕರೆತರಲಾಗುವುದು ಎಂದು ತಿಳಿಸಿದ್ದಾರೆ.

ಹಾಗೂ ತದನಂತರ ದೇಗುಲದ ದರ್ಶನ ಮಾಡಿ ಶರ್ವಾಣಿ ಕಲ್ಯಾಣ ಮಂಟಪದಲ್ಲಿ ಸಮಸ್ತ ಭಕ್ತರಿಗೆ ಫಲಮಂತ್ರಾಕ್ಷತೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!