ಸಂಧಾನ ವಿಫಲ: ನಾಳೆಯಿಂದ ಮುಷ್ಕರ ಖಚಿತ

ಬೆಂಗಳೂರು ಫೆ.28 : ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7 ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಮಾಹಿತಿ ನೀಡಿದ ಬಳಿಕವೂ ಸರ್ಕಾರಿ ನೌಕರರೊಂದಿಗೆ ರಾಜ್ಯ ಸರ್ಕಾರ ನಡೆಸಿದ ಸಂಧಾನ ವಿಫಲವಾಗಿದ್ದು, ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುವುದು ನಿಶ್ಚಿತವಾಗಿದೆ.

ನಾಳೆಯಿಂದ ರಾಜ್ಯಾದ್ಯಂತ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಸರಕಾರಿ ವೈದ್ಯರು, ನರ್ಸ್ ಗಳು ಕೂಡ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿರುವುದರಿಂದ ನಾಳೆ ಆಸ್ಪತ್ರೆಗಳಲ್ಲೂ ಆರೋಗ್ಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳೂ ಹೆಚ್ಚಾಗಿದೆ.

Leave a Reply

Your email address will not be published. Required fields are marked *

error: Content is protected !!