ಕಟ್ಟಡದಿಂದ ಜಿಗಿದು ಎಂ.ಬಿ.ಬಿ.ಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್ ಮಾ.2 : ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಎಂ.ಬಿ.ಬಿ.ಎಸ್ ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ ಶ್ರೀರಾಮ ಚಿಟಗುಪ್ಪ ತಾಲೂಕಿನ ಮುಸ್ತರಿ ಗ್ರಾಮದ ಶ್ರೀರಾಮ ತುಳಸಿರಾಮ (23) ಆತ್ಮಹತ್ಯೆ ಮಾಡಿಕೊಂಡವರು.

ಒತ್ತಡಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!