ಬಾಗಲಕೋಟೆ: ವಾಣಿಜ್ಯ ಮಳಿಗೆಯಲ್ಲಿಅಗ್ನಿಅವಘಡ: 20 ಕೋಟಿ ಅಂದಾಜು ನಷ್ಟ

ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರದಲ್ಲಿ 5 ಅಂತಸ್ತಿನ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 20 ಕೋಟಿ ಅಂದಾಜು ನಷ್ಟ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಳಕಲ್‌ನ ಬಸವೇಶ್ವರ ಸರ್ಕಲ್‌ನಲ್ಲಿ ಇರುವ ಚಂದ್ರಶೇಖರ್ ಸಜ್ಜನ ಎಂಬವರಿಗೆ ಸೇರಿದ ಶಾಪಿಂಗ್ ಸೆಂಟರ್ ಬೆಂಕಿಗಾಹುತಿಯಾಗಿದೆ.

ಮಳಿಗೆಯಲಿದ್ದ ಹಾರ್ಡವೇರ್ ಅಂಗಡಿಯಲ್ಲಿ ಉಂಟಾದ ಶಾರ್ಟ್ ಸಕ್ರ‍್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆಯಿಂದ 20 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದ್ದು, ಇಡೀ ಕಟ್ಟಡ ಬೆಂಕಿಗಾಹುತಿಯಾಗಿದೆ.
ಗುಳೇದಗುಡ್ಡ, ಕುಷ್ಟಗಿ, ಇಳಕಲ್, ಹುನಗುಂದ, ಬಾಗಲಕೋಟೆ ಭಾಗದಿಂದ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಇಳಕಲ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!