ಕೋಟ್ಯಂತರ ರೂ. ನಗದು ಸಿಕ್ಕಿದರೂ ಬಿಜೆಪಿ ಶಾಸಕನನ್ನು ಯಾಕೆ ಬಂಧಿಸಿಲ್ಲ : ಕೇಜ್ರಿವಾಲ್ ಪ್ರಶ್ನೆ

ಹೊಸದಿಲ್ಲಿ, ಮಾ.8 : ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಬಿಜೆಪಿ ಶಾಸಕನ ಮನೆಯಲ್ಲಿ ಕೋಟ್ಯಾಂತರ ರೂ. ಸಿಕ್ಕಿದರೂ ಇನ್ನೂ ಯಾಕೆ ಶಾಸಕನನ್ನು ಬಂಧಿಸಿಲ್ಲ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಶ್ನಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಂಚ ಆರೋಪದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ಕರ್ನಾಟಕದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಉದಾಹರಣೆಯಾಗಿ ಉಲ್ಲೇಖಿಸಿ, ಮನೀಷ್ ಸಿಸೋಡಿಯಾ ಅವರನ್ನು ಬಂಧಿಸುವಂತೆ  ಮಾಡಾಲ್ ವಿರೂಪಾಕ್ಷ ಅವರನ್ನು ಬಂಧಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ. 

ಹಾಗೂ ‘‘ಮನೀಷ್ ಸಿಸೋಡಿಯಾ ಅವರ ನಿವಾಸದಲ್ಲಿ ನಡೆಸಿದ ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ. ಅನಂತರ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಎಲ್ಲಾ ಸೆಕ್ಷನ್‌ಗಳನ್ನು ಹೇರಿ ಅವರನ್ನು ಬಂಧಿಸಿತು. ನಿಮ್ಮ ಪಕ್ಷದ ಶಾಸಕನ ಮನೆಯಲ್ಲಿ ದೊಡ್ಡ ಪ್ರಮಾಣದ ನಗದು ಪತ್ತೆಯಾಗಿದೆ. ಅವರನ್ನು ಬಂಧಿಸಿಲ್ಲ ಯಾಕೆ ?’’ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!