ಅಣ್ಣಾಮಲೈ ವಿರುದ್ಧ ಅಸಮಾಧಾನ- ತಮಿಳುನಾಡು ಬಿಜೆಪಿಯಿಂದ ಹೊರ ನಡೆದ 13 ನಾಯಕರು

ತಮಿಳುನಾಡು ಮಾ.9: ತಮಿಳುನಾಡು ಬಿಜೆಪಿಯ ಘಟಕದ ಐಟಿ ವಿಭಾಗದ ಪದಾಧಿಕಾರಿ ಸೇರಿದಂತೆ 13 ಮಂದಿ ಪಕ್ಷದ ಪದಾಧಿಕಾರಿಗಳು ಪಕ್ಷ ತೊರೆದಿರುವುದು ಬಿಜೆಪಿಗೆ ಶಾಕ್ ನೀಡಿದೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ವಿರುದ್ಧ ಅಸಮಾಧಾನ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗುತ್ತಿದೆ. ಪಕ್ಷದ ಚೆನ್ನೈ ಪಶ್ಚಿಮ ಘಟಕದ ಐಟಿ ವಿಭಾಗದ ಮುಖ್ಯಸ್ಥ ಓರತಿ ಅನ್ಬರಸು ಮತ್ತು ಇತರ 12 ಮಂದಿ ಪಕ್ಷವನ್ನು ತೊರೆದಿದ್ದಾರೆ. ಆದರೆ ಆಡಳಿತಾರೂಢ ಡಿಎಂಕೆಗೆ ಸೇರುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೇಳಿಕೆಯೊಂದರಲ್ಲಿ ಅನ್ಬರಸು ಅವರು ದೀರ್ಘಕಾಲದವರೆಗೆ ಬಿಜೆಪಿಯಲ್ಲಿದ್ದೇನೆ ಮತ್ತು ಪಕ್ಷದಲ್ಲಿನ “ಪಿತೂರಿಗಳಿಗೆ” ಬಲಿಯಾಗಲು ಬಯಸುವುದಿಲ್ಲ. ಆದ್ದರಿಂದ ಅದನ್ನು ತೊರೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷದ ಇತರ ಕೆಲವು ಪದಾಧಿಕಾರಿಗಳು ಸಹ ಬಿಜೆಪಿ ತೊರೆದು ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಗೆ ಸೇರ್ಪಡೆಗೊಂಡ್ದು, ಇದು ಎರಡು ಮಿತ್ರಪಕ್ಷಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!