ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಬಳಿಕ ಯುದ್ದ ಗೆದ್ದಂತೆ ಮೆರವಣಿಗೆ ಮಾಡಿರುವುದು ಸರಿಯಲ್ಲ – ನಳಿನ್ ಕಟೀಲ್

ಚನ್ನರಾಯಪಟ್ಟಣ, ಮಾ.9: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲಂಚ ಪ್ರಕರಣದಲ್ಲಿ ಜಾಮೀನು ದೊರೆತ ಮೇಲೆ ಯುದ್ದ ಗೆದ್ದು ಬಂದಂತೆ ಸಾರ್ವಜನಿಕ ಮೆರವಣಿಗೆ ಮಾಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಡಾಳು ವಿರೂಪಾಕ್ಷಪ್ಪ ಪ್ರಕರಣದಲ್ಲಿ ಪಕ್ಷ ರಕ್ಷಣೆ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ. ಇಂತಹ ಯಾವುದೇ ಭ್ರಷ್ಟಾಚಾರದ ಆರೋಪ ಸಹಿಸುವುದಿಲ್ಲ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ. ಜಾಮೀನು ದೊರೆತ ಮೇಲೆ ಯುದ್ದ ಗೆದ್ದು ಬಂದಂತೆ ಸಾರ್ವಜನಿಕ ಮೆರವಣಿಗೆ ಮಾಡಿರುವುದು ನಮಗೂ ಮುಜುಗರ ತಂದಿದೆ. ಮಾಡಾಳ್‍ಗೆ ಜಾಮೀನು ಸಿಕ್ಕಿರುವುದು ಕಾನೂನಾತ್ಮಕ ವಿಚಾರ. ನಾನು ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!