ವಿರೂಪಾಕ್ಷಪ್ಪ ಲಂಚ ಪ್ರಕರಣದಿಂದ ಸರಕಾರ ಮುಜುಗರಕ್ಕೀಡಾಗಿದೆ-ಮಾಧುಸ್ವಾಮಿ

ಬೆಂಗಳೂರು ಮಾ.9 : ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಪ್ರಕರಣದಿಂದ ರಾಜ್ಯ ಸರ್ಕಾರಕ್ಕೆ ಮುಜುಗರವನ್ನು ಅನುಭವಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸಿಜೆ ಮಾಧುಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಲಂಚ ಪ್ರಕರಣಕ್ಕೆ ಸಂಬಂಧಿಸಿ ವಿರೂಪಾಕ್ಷಪ್ಪ ಅವರಿಗೆ ರಾಜ್ಯ ಬಿಜೆಪಿ ನೋಟಿಸ್ ಜಾರಿ ಮಾಡಿದ್ದು, ಅವರಿಂದ ಈ ಬಗ್ಗೆ ವಿವರಣೆ ಕೇಳಿದೆ. ಈ ಲಂಚ ಪ್ರಕರಣ ಮುಜುಗರದ ಸಂಗತಿಯಾಗಿದ್ದು, ಅದನ್ನು ನಾವು ನಿರಾಕರಿಸುವುದಿಲ್ಲ ಎಂದರು.

ಹಾಗೂ ಪ್ರಕರಣದಲ್ಲಿ ಇನ್ನೂ ಶಾಸಕರ ಪುತ್ರ ಬಿ.ಡಬ್ಲ್ಯು.ಎಸ್.ಎಸ್ ಮುಖ್ಯ ಖಾತೆ ಅಧಿಕಾರಿ ಪ್ರಶಾಂತ್ ರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದರೂ ಅಮಾನತುಗೊಳಿಸದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ, ಯಾವ ಅಧಿಕಾರಿ ಕೂಡ 48 ಗಂಟೆಗಳಿಗಿಂತ ಹೆಚ್ಚು ಕಾಲ ಸೆರೆಯಲ್ಲಿದ್ದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

Leave a Reply

Your email address will not be published. Required fields are marked *

error: Content is protected !!