ನಿಲ್ಲಿಸಿದ್ದ ಬಿಎಂಟಿಸಿ ಬಸ್‍ಗೆ ಹತ್ತಿಕೊಂಡ ಬೆಂಕಿ-ನಿರ್ವಾಹಕ ಸಜೀವ ದಹನ

ಬೆಂಗಳೂರು ಮಾ.10 : ಲಿಂಗಧೀರನಹಳ್ಳಿಯ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್‍ನಲ್ಲಿ ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಇಂದು ನಸುಕಿನ ವೇಳೆ ನಡೆದಿದೆ.

ಬಳ್ಳಾರಿ ಮೂಲದ ಮುತ್ತಯ್ಯಸ್ವಾಮಿ(45) ಮೃತದ ದುರ್ವೈವಿ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ನಲ್ಲೇ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಬೆಳಗ್ಗೆ ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿರುವುದನ್ನು ನೋಡಿ ಬೀಟ್ ಪೋಲಿರು ತಕ್ಷಣ ಅಗ್ನಿಶಾಮಕದವರಿಗೆ ತಿಳಿಸಿ ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದಾಗ್ಯೂ ದುರದೃಷ್ಟವಶಾತ್ ನಿರ್ವಾಹಕ ಬದುಕುಳಿಯಲಿಲ್ಲ. ಅದೃಷ್ಟವಶಾತ್ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!