ಉಡುಪಿ ನೀರಿನ ಅಭಾವ- ಮಿತ ಬಳಕೆಗೆ ನಗರ ಸಭೆ ಮನವಿ

ಉಡುಪಿ ಮಾ.15 (ಉಡುಪಿ ಟೈಮ್ಸ್ ವರದಿ): ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣ ನದಿಯ ಬಜೆ ಡ್ಯಾಂ ನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗಿರುವುದರಿಂದ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದೇ ಜೀವಜಲ ನೀರಿನ ಸಂರಕ್ಷಣೆ ಹಾಗೂ ಮಿತವಾದ ಬಳಕೆಗೆ ಆದ್ಯತೆ ನೀಡುವಂತೆ ನಗರ ಸಭೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಈ ಬಗ್ಗೆ ನಗರ ಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣ ನದಿಯ ಬಜೆ ಡ್ಯಾಂ ನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದೇ ಜೀವಜಲ ನೀರಿನ ಸಂರಕ್ಷಣೆ ಹಾಗೂ ಮಿತವಾದ ಬಳಕೆಗೆ ಆದ್ಯತೆ ನೀಡಿ ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಸಹಕರಿಸಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!