ಸಿಕಂದರಾಬಾದ್: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ: ಕನಿಷ್ಠ ಆರು ಬಲಿ

ಸಿಕಂದರಾಬಾದ್ ಮಾ.17 : ವಾಣಿಜ್ಯ ಸಂಕೀರ್ಣವೊಂದರಲ್ಲಿ  ನಿನ್ನೆ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ ಆರು ಜನರು ಮೃತಪಟ್ಟಿರುವ ಘಟನೆ ನಡೆದಿದೆ.

ರಾತ್ರಿ 7:30ರ ಸುಮಾರಿಗೆ ಕಾಂಪ್ಲೆಕ್ಸ್‌ನ 7 ಮತ್ತು 8ನೇ ಮಹಡಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಎರಡೂ ಅಂತಸ್ತುಗಳನ್ನು ಆವರಿಸಿಕೊಂಡಿತ್ತು. ಅವಘಡದಲ್ಲಿ ಹಲವರು ಕಾಂಪ್ಲೆಕ್ಸ್‌ನೊಳಗೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ತೆಲಂಗಾಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ತಡರಾತ್ರಿಯವರೆಗೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಹಾಗೂ ಸಿಬ್ಬಂದಿಗಳು ಎತ್ತರದ ಕ್ರೇನ್‌ಗಳನ್ನು ಬಳಸಿ ಹಲವರನ್ನು ಕಟ್ಟಡದಿಂದ ಹೊರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!