ರಾಮಾಂಜಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರ

ಉಡುಪಿ ಮಾ.17 (ಉಡುಪಿ ಟೈಮ್ಸ್ ವರದಿ): ಕುಂದಾಪುರ ನಮ್ಮ ಭೂಮಿಯ ರಾಮಾಂಜಿ ಅವರಿಗೆ ಬ್ಯಾಂಕ್ ಆಫ್ ಬರೋಡ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.

ರಾಮಾಂಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಕೋಸ್ರ್ಗಳಲ್ಲಿ ಶಿಕ್ಷಣ, ಕ್ರೀಡೆ ಹಾಗೂ ಸವಾರ್ಂಗೀಣ ಕ್ಷೇತ್ರಗಳಲ್ಲಿ ಮಾಡಿದ ವಿಶೇಷ ಸಾಧನೆಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ರಾಮಾಂಜಿ ಸೇರಿದಂತೆ ಅಂತಿಮ ಸ್ನಾತಕೋತ್ತರ ಮೂವರು ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಮಾ.18 ರಂದು ಅಪರಾಹ್ನ 2:30 ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭಾಂಗಣದಲ್ಲಿ ವಿವಿಯ ಕುಲಪತಿ ಪ್ರೊ.ಪಿ.ಎಸ್. ಎಡಪಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಗುವುದು.

ರಾಮಾಂಜಿ ಅವರು ಮಂಗಳೂರು ವಿವಿಯ ಎಸ್‍ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ 2022-23ನೇ ಸಾಲಿನ ಕನ್ನಡ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.80.03 ಫಲಿತಾಂಶ ಪಡೆದ ಸಾಧನೆ ತೋರಿದ್ದಾರೆ. ರಾಮಾಂಜಿ ಅವರಿಗೆ ಕಲೆ, ಸಾಹಿತ್ಯ, ಸಂಸ್ಕೃತಿ, ಪರಿಸರ, ಶಿಕ್ಷಣ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಇತ್ತೀಗಷ್ಟೇ ಬೆಂಗಳೂರಿನ ಸಿದ್ಧಾರೂಢ ಮಿಷನ್ ಸಂಸ್ಥೆವತಿಯಿಂದ `ಕರ್ನಾಟಕ ಕಲಾಭೂಷಣ’ ರಾಷ್ಟ್ರೀಯ ಪ್ರಶಸ್ತಿ ಪ್ರಾಪ್ತವಾಗಿತ್ತು. ರಾಮಾಂಜಿ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪತ್ರಿಕೋದ್ಯಮದಲ್ಲಿ ಪೂರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!