ಕಾರ್ಕಳ: ಈ ಬಾರಿ ಚುನಾವಣೆಯಲ್ಲಿ ಸುನಿಲ್ ಕುಮಾರ್ ಬದಲು ನನಗೆ ಅವಕಾಶ ನೀಡಿ : ಡಾ. ಮಮತಾ ಹೆಗ್ಡೆ
ಉಡುಪಿ ಮಾ.17 : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಮಮತಾ ಹೆಗ್ಡೆ ಅವರು ಹೇಳಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು, ಸಚಿವ ಸುನಿಲ್ ಕುಮಾರ್ ಅವರಿಗೆ ಪಕ್ಷ ಈಗಾಗಲೇ ಸಾಕಷ್ಟು ಅವಕಾಶ ನೀಡಿದೆ. ಆದರೂ ಕಾರ್ಕಳ ಕ್ಷೇತ್ರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಂಡಿಲ್ಲ. ಹಾಗಾಗಿ ಕಾರ್ಕಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ಬಿಜೆಪಿ ಪಕ್ಷವು ಸುನಿಲ್ ಕುಮಾರ್ ಬದಲು ತನಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಹಾಗೂ ಒಂದು ವೇಳೆ ಬಿಜೆಪಿ ಟಿಕೆಟ್ ನೀಡಿದಿದ್ದರೆ ಸ್ವತಂತ್ರ ಅಭ್ಯರ್ಥಿ ಅಥವಾ ಬೇರೆ ಪಕ್ಷದಿಂದ ಕಣಕ್ಕೆ ಇಳಿಯುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತಿಲ್ಲ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ವಿಶಾಲಾಕ್ಷಿ ಶೆಟ್ಟಿ, ವೇದಾವತಿ ಹೆಗ್ಡೆ, ಮಾಯಾ ಹೆಗ್ಡೆ, ಪ್ರಕಾಶ್ ಶೆಟ್ಟಿ, ವಿನೂತನ ಶೆಟ್ಟಿ, ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.