ವಿಟ್ಲ: ಬೋರ್ವೆಲ್ ಲಾರಿ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಮೃತ್ಯು

ವಿಟ್ಲ, ಮಾ.18: ಕೊಳವೆಬಾವಿ ಕೊರೆಯುವ (ಬೋರುವೆಲ್ ಲಾರಿ) ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಪೇಟೆ ಹೊರವಲಯದ ಕಾಶೀಮಠ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ಅಪಘಾತದಲ್ಲಿ ಸಹಸವಾರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ

ರಂಜಿತ್ ತನ್ನ ದ್ವಿಚಕ್ರ ವಾಹನದಲ್ಲಿ ವಿಟ್ಲ ಕಡೆಯಿಂದ ಉಕ್ಕುಡದತ್ತ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಂಜಿತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!