ಶಂಕರನಾರಾಯಣ: ಅನಾರೋಗ್ಯದ ಕಾರಣ-ವ್ಯಕ್ತಿ ಆತ್ಮಹತ್ಯೆ
ಶಂಕರನಾರಾಯಣ ಮಾ.18 (ಉಡುಪಿ ಟೈಮ್ಸ್ ವರದಿ): ತಮ್ಮ ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಗುಡಿ ಬೆಟ್ಟು ಮೇಲ್ಬೆಟ್ಟು ಹೆಬ್ಬಾಗಿಲು ಮನೆ ಎಂಬಲ್ಲಿ ನಡೆದಿದೆ.
ಅಂಪಾರು ಗ್ರಾಮದ ಗೊವೀಂದಶೆಟ್ಟಿ(85) ಆತ್ಮಹತ್ಯೆ ಮಾಡಿಕೊಂಡವರು. ಇವರು ತಮಗಿದ್ದ ಅನಾರೋಗ್ಯದಿಂದ ಮನನೊಂದು ನಿನ್ನೆ ಮಧ್ಯಾಹ್ನದ ವೇಳೆ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.