ಗಂಗೊಳ್ಳಿ: ರೈಲ್ವೇ ಸೇತುವೆ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ಗಂಗೊಳ್ಳಿ ಮಾ.18 (ಉಡುಪಿ ಟೈಮ್ಸ್ ವರದಿ): ಹಕ್ಲಾಡಿ ಗ್ರಾಮದ ಕಟ್ಟಿನ ಮಕ್ಕಿ ರೈಲ್ವೇ ಸೇತುವೆ ಬಳಿ ಪೊದೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 25 ರಿಂದ 30 ವರ್ಷದ ಅಪರಿಚಿತ ವ್ಯಕ್ತಿ ಮೃತದೇಹ ಇದಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಈ ವ್ಯಕ್ತಿಯು ಎರಡು ದಿನಗಳ ಹಿಂದೆ ಚಲಿಸುವ ರೈಲಿನಿಂದ ಬಿದ್ದು ಮೃತಪಟ್ಟಿರಬಹುದು ಎಂಬುದಾಗಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.