ಚುನಾವಣೆ ಗೆದ್ದು ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ಮುಂದಿನ ಮುಖ್ಯಮಂತ್ರಿ ಯಾರೆಂಬ ನಿರ್ಧಾರ-ಬಿಎಸ್.ವೈ

ಹಿರಿಯೂರು ಮಾ.20 : ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಮರಳಿದ ಬಳಿಕವಷ್ಟೇ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸಲಾಗುವುದು ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದರು.

ಚುನಾವಣಾ ಪ್ರಚಾರ ಮತ್ತು ರೋಡ್ ಶೋದಲ್ಲಿ ಭಾಗವಹಿಸುವ ಸಲುವಾಗಿ ಚಿತ್ರದುರ್ಗದ ಹಿರಿಯೂರಿಗೆ ಆಗಮಿಸಿದ ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಂತರವಷ್ಟೇ ಮುಖ್ಯಮಂತ್ರಿ ಯಾರೆಂಬ ತೀರ್ಮಾನ ಆಗಲಿದೆ ಎಂದು ಅವರು ಹೇಳಿದ್ದಾರೆ.

ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದು ಅದ್ಭುತ ಕಾರ್ಯಕ್ರಮ ಆಗಲಿದೆ. ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ. ಕಾಂಗ್ರೆಸ್ಸಿಗೆ ಭವಿಷ್ಯವಿದೆ ಅಂತ ನನಗೆ ಅನಿಸುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ 140 ಸೀಟು ಗೆದ್ದರೆ ಕಾಂಗ್ರೆಸ್‍ನವರು ಎಲ್ಲಿದ್ದಾರೆ ಅಂತ ಹುಡುಕವ ಪರಿಸ್ಥಿತಿ ಬರಲಿದೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ನೀರಿಕ್ಷೆಗೂ ಮೀರಿ ಜನ ಬೆಂಬಲ ನಮಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!