ಕುಂದಾಪುರ: ಬೈಕ್ ಗೆ ಬಸ್ ಡಿಕ್ಕಿ ವ್ಯಕ್ತಿ ಮೃತ

ಕುಂದಾಪುರ: ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬ್ರಹ್ಮಾವರದ ಗಿಳಿಯಾರು ಗ್ರಾಮದಲ್ಲಿ ನಡೆದಿದೆ. ಪ್ರವೀಣ್‌‌ ಮೃತಪಟ್ಟ ವರು. ಇವರು ಫೆ. 18 ರಂದು ಕೋಣಿ-ಕಟ್ಗೇರಿ  ಕಡೆಯಿಂದ  ಕೊಟೇಶ್ವರ ಕಡೆಗೆ ಹೋಗುತ್ತಿದ್ದ ವೇಳೆ ಇವರ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಪ್ರವೀಣ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಆಸ್ಪತ್ರೆ ಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ  ಕುಂದಾಪುರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!