ಕರ್ನಾಟಕ ಸಂಘ ಶಾರ್ಜಾದ ವಾರ್ಷಿಕ ಮಹಾಸಭೆ, ಪದಗ್ರಹಣ ಸಮಾರಂಭ

ದುಬೈ ಮಾ.21(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಸಂಘ ಶಾರ್ಜಾ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ದುಬೈನ ಫಾರ್ಚೂನ್ ಅಟ್ರೀಮ್ ಸಂಭಾಂಗಣದಲ್ಲಿ ನಡೆಯಿತು.

ಸಮಾರಂಭದಲ್ಲಿ ಕರ್ನಾಟಕ ಸಂಘ ಶಾರ್ಜಾ ಇದರ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ, ಉಪಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ವಿಘ್ನೇಶ್ ಕುಂದಾಪುರ ಮತ್ತು ಜೊತೆ ಕಾರ್ಯದರ್ಶಿ ಅಬ್ರಹರ್, ಶಾಧಿಕಾರಿಯಾಗಿ ಸುಗಂಧರಾಜ್ ಬೆಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಜೀವನ್ ಕೂಕ್ಯಾನ್ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಮರ್ ಉಮೇಶ್ ಇವರನ್ನು ನೇಮಿಸಲಾಯಿತು. 

ಈ ವೇಳೆ ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಮಾತನಾಡಿದ ಸತೀಶ್ ಪೂಜಾರಿ ಅವರು ಸಮಾಜದ ಮತ್ತು ಅನಿವಾಸಿ ಕನ್ನಡಿಗರ ಸೇವೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರ ಮೂಲಕ ಸಂಘದ ಧ್ಯೇಯೋದ್ದೇಶಗಳನ್ನು ಜವಾಬ್ದಾರಿಯಿಂದ ನಡೆಸಿಕೊಂಡು ಹೋಗುತ್ತೇನೆ ಮತ್ತು ಇದಕ್ಕಾಗಿ ಎಲ್ಲಾ ಸಂಘದ ಸದಸ್ಯರ ಹಾಗೂ ಅನಿವಾಸಿ ಕನ್ನಡಿಗರ ಸಹಕಾರ ಮತ್ತು ಪ್ರೋತ್ಸಾಹ ನೀಡಬೇಕಾಗಿ ಕೇಳಿಕೊಂಡರು.

ಗೌರವ ಸಲಹೆಗಾರರಾದ ಆನಂದ್ ಬೈಲೂರು, ಗಣೇಶ್ ರೈ, ಪ್ರಭಾಕರ್ ಅಂಬಲತೇರೆ ಮತ್ತು ನೋವೆಲ್ ಡಿ ಅಲ್ಮೇಡಾ ಮತ್ತು ಮಹಿಳಾ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸಂಘ ಶಾರ್ಜಾದ ಮಹಾ ಪೋಷಕರಾದ ಮಾರ್ಕ್ ಡೆನ್ನಿಸ್ ಡಿ ಸೋಜಾ, ಮಾಜಿ ಅಧ್ಯಕ್ಷ ಎಂ.ಇ.ಮೂಳುರು , ಮಾಜಿ ಉಪಾಧ್ಯಕ್ಷ ನೋವೆಲ್ ಡಿ ಅಲ್ಮೇಡಾ, ಮಾಜಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಮತ್ತು ಮಾಜಿ ಜೊತೆ ಕಾರ್ಯದರ್ಶಿ ಅಮರ್ ಉಮೇಶ್ ಮತ್ತು ಮಾಜಿ ಕೋಶಾಧಿಕಾರಿ ಅಬ್ರಹರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!