ಬಿಜೆಪಿಗೆ ಪ್ರತ್ಯುತ್ತರವಾಗಿ ಕರ್ನಾಟದಲ್ಲಿ ಕಾಂಗ್ರೆಸ್ ಗೆಲ್ಲುವತ್ತ ಗಮನಹರಿಸಬೇಕು- ಪ್ರಿಯಾಂಕಾ ಗಾಂಧಿ

ನವದೆಹಲಿ ಮಾ.25 : ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದಕ್ಕೆ ಉತ್ತರವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವತ್ತ ಗಮನ ಹರಿಸಬೇಕು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ.

ನಿನ್ನೆ ದೆಹಲಿಯಲ್ಲಿ ಈ ವಿಷಯದ ಕುರಿತು ಕಾಂಗ್ರೆಸ್ ನಾಯಕರು ತುರ್ತು ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದಕ್ಕೆ ಬಿಜೆಪಿಗೆ ತಕ್ಕ ಪ್ರತ್ಯುತ್ತರವಾಗಿ ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವತ್ತ ಕಾಂಗ್ರೆಸ್ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ವಿರೋಧಿಸಿ ಕಾಂಗ್ರೆಸ್ ನ ಎಲ್ಲಾ ಸಂಸದರು ಸಾಮೂಹಿಕ ರಾಜೀನಾಮೆ ನೀಡಬಹುದು ಎಂದು ಸಂಸದರೊಬ್ಬರು ಸಲಹೆ ನೀಡಿದ್ದಾರೆ. ಹಾಗೂ ಈ ವಿಷಯದಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸಮಿತಿಯನ್ನು ರಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!