ಮಾಜಿ ಸಂಸದ ಹಾಗೂ ಪುತ್ರ ಬಿಜೆಪಿಗೆ ರಾಜೀನಾಮೆ-ಕಾಂಗ್ರೆಸ್ ಸೇರ್ಪಡೆ?

ಹಾವೇರಿ ಮಾ.27 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಷೇತ್ರದ ಮಾಜಿ ಸಂಸದ ಮಂಜುನಾಥ್ ಕುನ್ನೂರು ಹಾಗೂ ಅವರ ಪುತ್ರ ರಾಜು ಕುನ್ನೂರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮಂಜುನಾಥ್ ಕುನ್ನೂರು ಶಿಗ್ಗಾಂವಿ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿದ್ದರು. 1989-1994 ಮತ್ತು 1994-1999 ರ ಅವಧಿಯಲ್ಲಿ ಶಾಸಕರಾಗಿದ್ದು, 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾದರು.

Leave a Reply

Your email address will not be published. Required fields are marked *

error: Content is protected !!