ಎ.5 -ರಾಹುಲ್ ಗಾಂಧಿ ರಾಜ್ಯಕ್ಕೆ-ಕೋಲಾರದಿಂದಲೇ ಬಿಜೆಪಿಗೆ ಪ್ರತ್ಯುತ್ತರ

ಕೋಲಾರ ಮಾ.28: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು  ಏಪ್ರಿಲ್​ 5 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ಹಿನ್ನೆಲೆ ರಾಹುಲ್​ ಗಾಂಧಿ ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಬಗ್ಗೆ ಕೋಲಾರದಲ್ಲಿ ಪ್ರತ್ಯುತ್ತರ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಹುಲ್​ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಬಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ ಆರಂಭಿಸಿ, ಅನರ್ಹಗೊಳಿಸಿದ್ದನ್ನೇ ಪ್ರಚಾರದ ಪ್ರಭಲ‌ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಮತ್ತು ಬಿಜೆಪಿ ಸರ್ಕಾರಕ್ಕೆ ಉತ್ತರ ನೀಡಲು ಸಿದ್ದವಾಗಿದೆ ಎಂಬ ಮಾತುಗಳೂ ಕೇಳಿ ಬರುತ್ತಿದೆ.

Leave a Reply

Your email address will not be published. Required fields are marked *

error: Content is protected !!