ಗುರು ರಾಘವೇಂದ್ರ ಬ್ಯಾಂಕ್ ಹಗರಣ: 114.19 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು, ಮಾ.28: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕಿನ ಹಗರಣ ಪ್ರಕರಣಕ್ಕೆ ಸಂಬಂಧಿಸಿ 114.19 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಈಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಠೇವಣಿಯ ದುರುಪಯೋಗದ ಹಿನ್ನೆಲೆಯಲ್ಲಿ ಪಿಎಂಎಎಲ್‍ಎ 2002ರ ಕಾಯ್ದೆಯಡಿ 21 ಸ್ಥಿರಾಸ್ತಿ ಸೇರಿ ಖಾಲಿ ಭೂಮಿ, ಕಟ್ಟಡಗಳು, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳನ್ನು ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಚರಾಸ್ಥಿ ರೂಪದ 3.15 ಕೋಟಿ ರೂ. ಬ್ಯಾಂಕ್ ಬ್ಯಾಲೆನ್ಸ್ ಕೂಡ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ.

ಬ್ಯಾಂಕ್‍ನಿಂದ ಸಾಲ ಪಡೆದು ಸಾಲ ಮರುಪಾವತಿ ಮಾಡದೇ ಸುಸ್ತಿದಾರರಾಗಿರುವವರ ಆಸ್ತಿ-ಜಪ್ತಿಯನ್ನು ಜಪ್ತಿ ಮಾಡಲಾಗಿದೆ.ಇನ್ನೂ, ಸಾರ್ವಜನಿಕ ಆಸ್ತಿಯನ್ನ ಅಕ್ರಮವಾಗಿ ಬಳಸಿಕೊಂಡ ಆರೋಪದ ಅಡಿ ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ವಿರುದ್ದ ಈಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!