ಪಡುಬಿದ್ರೆ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
ಪಡುಬಿದ್ರೆ ಎ.14 (ಉಡುಪಿ ಟೈಮ್ಸ್ ವರದಿ): ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪು ತಾಲೂಕಿನ ಪಲಿಮಾರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಕೃಷಿಕರಾಗಿರುವ ಭಾಸ್ಕರ ದೇವಾಡಿಗ (60) ಮೃತಪಟ್ಟವರು. ಇವರು ನಿನ್ನೆ ಕೆಲಸ ಮುಗಿಸಿ ಸಂಜೆ ಪಲಿಮಾರು ಪೇಟೆಗೆ ಹೋಗಿ ವಾಪಾಸ್ಸು ಮನೆಗೆ ನಡೆದುಕೊಂಡು ಬರುತ್ತಿರುವಾಗ, ಪಲಿಮಾರು ಗ್ರಾಮದ ಅವರ ಮನೆಯ ಸಮೀಪದ ಕಾಲು ದಾರಿಯ ಬದಿಯಲ್ಲಿ ಇದ್ದ ಗಿರೀಶ್ ಎಂಬುವರ ಆವರಣ ದಂಡೆ ಇರುವ ಬಾವಿಯ ಕುಂದವನ್ನು ಹಿಡಿದು ಮುಂದೆ ಸಾಗುತ್ತಿದ್ದಾಗ ಆಕಸ್ಮಿಕವಾಗಿ ಕೈಜಾರಿ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಸಂಬಂಧಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.