ಕುಂದಾಪುರ: ಯುವಕ ಆತ್ಮಹತ್ಯೆ

ಕುಂದಾಪುರ ಎ.14(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದ ಕಾರಣ ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಅಸೋಡು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ಪವನ್‌ ಜಿ. ಆಚಾರ್(‌25) ಆತ್ಮಹತ್ಯೆ ಮಾಡಿಕೊಂಡವರು. ಇವರು ಎ.12 ರಂದು ರಾತ್ರಿ ಮನೆಯಲ್ಲಿ ಮಲಗಿದ್ದು ಮರುದಿನ ಬೆಳಿಗ್ಗೆ ಅವರ ಅಣ್ಣ ನೋಡುವಾಗ ಪವನ್ ಅವರು ಮಲಗಿದಲ್ಲಿ ಇಲ್ಲದೇ ಇರುವುದು ಗಮನಕ್ಕೆ ಬಂದಿದೆ. ಈ ವೇಳೆ ಅವರನ್ನು ಹುಡುಕಿದಾಗ ನೆರೆಮನೆಯವರ ಬಾವಿಯಲ್ಲಿ ಪವನ್ ಅವರ ಮೃತದೇಹ ಪತ್ತೆಯಾಗಿದೆ. ಅವರಂತೆ ಪವನ್ ಅವರು ತಮಗಿದ್ದ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಅಣ್ಣ ಸಚಿನ್ ಎಂಬವರು ನೀಡಿದ ದೂರಿನಂತೆ  ಕುಂದಾಫುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!