ಕಾರ್ಕಳ:ಕ್ರಿಕೆಟ್ ಬೆಟ್ಟಿಂಗ್- 25 ಸಾವಿರ ರೂ. ನಗದು, ಓರ್ವ ವಶ

ಕಾರ್ಕಳ ಎ.14(ಉಡುಪಿ ಟೈಮ್ಸ್ ವರದಿ):ಕ್ರಿಕೆಟ್ ಬೆಟ್ಟಿಂಗ್  ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ತಾಲೂಕಿನ ಮುಡಾರು ಗ್ರಾಮದ ಬಜಗೋಳಿ ಪೇಟೆಯ ಬಸ್ ನಿಲ್ದಾಣದ ಬಳಿ ನಡೆದಿದೆ

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಜಗೋಳಿ ಪೇಟೆಯ ಬಸ್ ನಿಲ್ದಾಣದ ಬಳಿ ಇರುವ ವೈನ್ಸ್ ಶಾಪ್ ಪಕ್ಕದ ರಸ್ತೆಯಲ್ಲಿ ಸಾರ್ವಜನಿಕರಿಂದ  IPL ಕ್ರಿಕೆಟ್ ಬೆಟ್ಟಿಂಗ್ ಗೆ ಹಣ ಸಂಗ್ರಹಿಸುತ್ತಿದ್ದ ಆರೋಪಿ ದೇವೇಂದ್ರ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರ ದಾಳಿ ವೇಳೆ ಸ್ಥಳದಲ್ಲಿ ಇದ್ದ ಮಧು ಅಜೆಕಾರು, ಪ್ರಭಾಕರ ನೆಲ್ಲಿಕಾರ್, ಕರ್ಣ ನಲ್ಲೂರು ಹಾಗೂ ನವೀನ್ ಬಜಗೋಳಿ ಎಂಬವರು ಓಡಿ ಹೋಗಿದ್ದು, ಆರೋಪಿ ದೇವೇಂದ್ರ ಶೆಟ್ಟಿ ಯನ್ನು ವಶಕ್ಕೆ ಪಡೆದು ಆತನಿಂದ 3 ಮೊಬೈಲ್ ಫೋನ್,  ಬೆಟ್ಟಿಂಗ್‌‌ನಿಂದ ಸಂಗ್ರಹಿಸಿದ 25,000 ರೂ. ನಗದು ಹಾಗೂ ಬೈಕ್ ನ್ನು ಮಹಜರು ಮುಖೇನ ವಶಪಡಿಸಿಕೊಂಡಿದ್ದಾರೆ.  ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!