ಹಿರಿಯಡ್ಕ: ಮಟ್ಕಾ ಜುಗಾರಿ- ಓರ್ವ ವಶ
ಹಿರಿಯಡ್ಕ ಎ.17(ಉಡುಪಿ ಟೈಮ್ಸ್ ವರದಿ): ಪೆರ್ಡೂರು ಗ್ರಾಮದ ಮುತ್ತುರ್ಮೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆಗೆ ದಾಳಿ ಮಾಡಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಹಿರಿಯಡ್ಕ ಠಾಣಾ ಪೊಲೀಸರು ಪೆರ್ಡೂರು ಗ್ರಾಮದ ಮುತ್ತುರ್ಮೆ ಬಳಿಯ ಸಾರ್ವಜನಿಕ ಸ್ಥಳಕ್ಕೆ ದಾಳಿ ಮಾಡಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಕೃಷ್ಣ ಹರಿಜನ (40) ಎಂಬಾತನನ್ನು ವಶಕ್ಕೆ ಪಡೆದು, ಆತನಿಂದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ 1395 ರೂ. ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.