ಬೈಂದೂರು: ಬಸ್ ಸ್ಟಾಂಡ್ ಬಳಿ ಮದ್ಯ ಸೇವನೆ-ಓರ್ವ ವಶ
ಬೈಂದೂರು ಎ.18 (ಉಡುಪಿ ಟೈಮ್ಸ್ ವರದಿ): ಕಾನೂನು ಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಬೈಂದೂರಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೈಂದೂರು ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಮಂಜುನಾಥ ಬೋವಿ (46) ಎಂಬಾತನನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ ಮದ್ಯದ ಪ್ಯಾಕೇಟ್ ಗಳನ್ನು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.