ಹೆಗಲು ಮುಟ್ಟಿ ನೋಡಿ ಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧ ವಿರಬಹುದೇ? ಸಿಡಿ ಪ್ರಕರಣಕ್ಕೆ ಬಿ ಜೆ ಪಿ ಟ್ವಿಟ್

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಮುಗಿಯದ ಅಧ್ಯಾಯ ಎಂಬಂತೆ ದಿನ ದಿನ ಚರ್ಚೆ ನಡೆಯುತ್ತಲೇ ಇದೆ.
ಸಿಡಿಯ ಹಿಂದಿರುವ ‘ಮಹಾನಾಯಕ’ ಯಾರು ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಚರ್ಚೆಗೆ ಕಾರಣವಾಗಿದ್ದು. ಅವರಿವರ ಮೇಲೆ ಕೆಸರೆರೆಚಾಟ ಮುಂದುವರೆದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಫೋಟೋವೊಂದನ್ನು ಪ್ರಕಟಿಸಿದ್ದು , ಈ ಟ್ವೀಟ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ಸಿಡಿ ಪ್ರಕರಣದ ಮಾಸ್ಟರ್​ ಮೈಂಡ್​ ಎನ್ನಲಾದ ನರೇಶ್​ ಇಬ್ಬರೂ ಜೊತೆಗೆ ನಿಂತಿರುವ ಫೋಟೋವನ್ನು ಶೇರ್ ಮಾಡಲಾಗಿದೆ. ಅಲ್ಲದೆ “ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ? ಮಾಸ್ಟರ್‌ ಮೈಂಡ್ ಮತ್ತು ರಿಂಗ್‌ ಮಾಸ್ಟರ್ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ, ನನ್ನನ್ನು ಸಿಲುಕಿಸುವ ಕುತಂತ್ರ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? ಎನ್ನುವ ಬರಹದೊಂದಿಗೆ ಈ ಫೋಟೋವನ್ನುಬಿಜೆಪಿ ಹಂಚಿಕೊಂಡಿದೆ ಮಾ. 14 ರಂದು ಶಿವಮೊಗ್ಗದಲ್ಲಿ ಪ್ರಕರಣಕ್ಕೆ ಸಂಬಂಧಿಸಿ

“ನನ್ನ ಮೇಲೆ ಹಿಂದಿನಿಂದಲೂ ಷಡ್ಯಂತ್ರಗಳು ನಡೆದುಕೊಂಡು ಬಂದಿವೆ. ಅವು ಈಗಲೂ ಮುಂದುವರಿದಿವೆ. ಸಿ.ಡಿ ಪ್ರಕರಣದಲ್ಲಿ ನನ್ನನ್ನು ಸುಖಾ ಸುಮ್ಮನೆ ಸಿಲುಕಿಸುವ ಪ್ರಯತ್ನ ನಡೆದಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಈ ಟ್ಟೀಟ್ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಲೇವಡಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!