ಅಮಾಸೆಬೈಲ್: ವ್ಯಕ್ತಿ ನಾಪತ್ತೆ
ಅಮಾಸೆಬೈಲು ಮೇ.4(ಉಡುಪಿ ಟೈಮ್ಸ್ ವರದಿ):ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಅಮಾಸೆಬೈಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಂಗಡಿ ಕೆಪಿಸಿಯಲ್ಲಿ ಉದ್ಯೋಗಿಯಾಗಿದ್ದ ಕೆ. ಆರ್ ರಾಜೇಶ (42) ನಾಪತ್ತೆಯಾಗಿರುವವರು. ಇವರು ಎ.1 ರಂದು ಮನೆಯಲ್ಲಿ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ರಾಜೇಶ ಅವರ ತಮ್ಮ ನೀಡಿದ ದೂರಿನಂತೆ ಅಮಾಸೆಬೈಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.