ಉಡುಪಿ:ಪ್ರಸಾದ್ ನೇತ್ರಾಲಯದ ವತಿಯಿಂದ ಮಾ.21 ರಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ

ಉಡುಪಿ( ಉಡುಪಿ ಟೈಮ್ಸ್ ವರದಿ):ಕರಾವಳಿ ಕರ್ನಾಟಕದ ಅತೀ ದೊಡ್ಡ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ವತಿಯಿಂದ ‘ಲಾಸಿಕ್ – ಸ್ಮೈಲ್ ಮತ್ತು ಪಿಆರ್‍ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಮಾ. 21 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಪ್ರಸಾದ್ ನೇತ್ರಾಲಯದಲ್ಲಿ ಆಯೋಜಿಸಲಾಗಿದೆ.

ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್ ಲೆನ್ಸ್ ಮುಕ್ತಿ ಹೊಂದಬಹುದಲ್ಲದೇ ಈ ಚಿಕಿತ್ಸೆಯಿಂದ 5 ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆಯ ನಂತರ ಕೂಡಲೇ ರೋಗಿಯು ತನ್ನೆಲ್ಲಾ ದೈನಂದಿನ ಚಟುವಟಿಕೆಗಳನ್ನು ಎಂದಿನಂತೆ ಮಾಡಬಹುದು. 18 ವರ್ಷ ಪ್ರಾಯದಿಂದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಈ ಚಿಕಿತ್ಸೆಯನ್ನು ಮಾಡಬಹುದಾಗಿದ್ದು, ಯಾವುದೇ ನೋವು ಈ ಚಿಕಿತ್ಸೆಯಿಂದ ಉಂಟಾಗುವುದಿಲ್ಲ.
ಶಿಬಿರದಲ್ಲಿ ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲೇಸರ್ ಚಿಕಿತ್ಸೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅತೀ ಹೆಚ್ಚಿನ ರಿಯಾಯಿತಿ ದರದಲ್ಲಿ ನಡೆಸಲಾಗುವುದು. ಚಿಕಿತ್ಸೆಯ ಪೂರ್ವಭಾವಿ ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಫಿ ಸ್ಕ್ಯಾನ್ (ಶಸ್ತ್ರ ಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಮೊದಲಾದ ಸೌಲಭ್ಯಗಳನ್ನು ಶಿಬಿರದಲ್ಲಿ ಉಚಿತವಾಗಿ ಒದಗಿಸಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!