ಕಾಸರಗೋಡು : ಚರ್ಚ್ ನ ಪ್ರತಿಮೆಗೆ ದುಷ್ಕರ್ಮಿಗಳಿಂದ ಹಾನಿ

ಕಾಸರಗೋಡು : ನಗರದ ಮಣಿಯಂಪಾರೆ ಸೇಂಟ್ ಲಾರೆನ್ಸ್ ಚರ್ಚ್‍ನ ಪ್ರತಿಮೆಗೆ ದುಷ್ಕರ್ಮಿಗಳು ಹಾನಿಗೆಡವಿರುವ ಘಟನೆ ಇಂದು (ಮಾ.22) ಮುಂಜಾನೆ ಬೆಳಕಿಗೆ ಬಂದಿದೆ.
ಯುವಕನೊಬ್ಬ ಇಂದು ಬೆಳಗ್ಗೆ ಗಾಜಿಗೆ ಹಾನಿಯಾಗಿರುವುದನ್ನು ಗಮನಿಸಿದ ವೇಳೆ ಪ್ರತಿಮೆಯನ್ನು ಧ್ವಂಸ ಮಾಡಿರುವುದು ತಿಳಿದು ಬಂದಿದೆ. ಮಾರ್ಚ್ 21 ರ ತಡರಾತ್ರಿ ಮಣಿಯಂಪಾರೆ ಚರ್ಚ್‍ನಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಇನ್ನು ಕೃತ್ಯವನ್ನು ಖಂಡಿಸಿರುವ ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶದ ಕುಂಬ್ಲೆಯ ನಾಮನಿರ್ದೇಶಿತ ಅಧ್ಯಕ್ಷ ರಾಜು ಸ್ಟೀಫನ್ ಡಿ ಸೋಜಾ, ಕಾಸರಗೋಡಿನ ಕ್ಯಾಥೊಲಿಕ್ ಸಭಾದ ಅಧ್ಯಕ್ಷ ವಿಲ್ಫ್ರೆಡ್ ಮನೋಹರ್ ಕ್ರಾಸ್ತಾ ಅವರು ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಬದಿಯಡ್ಕ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!