ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ- ನಾಲ್ವರು ವಶ

ಉಡುಪಿ ಮೇ 28(ಉಡುಪಿ ಟೈಮ್ಸ್ ವರದಿ): ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಂಕರನಾರಾಯಣ ಠಾಣಾ ಪೊಲೀಸರು ಠಾಣಾ ವ್ಯಾಪ್ತಿಯ ಬೆಳ್ವೆ  ಗ್ರಾಮದ ಗೋಳಿಯಂಗಡಿಯ ಹೆಂಗವಳ್ಳಿ ಕ್ರಾಸ್ ಬಳಿಯ ಬಸ್ಸು ನಿಲ್ದಾಣದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ವಸಂತ್ ನಾಯ್ಕ ( 36 ) ನನ್ನು, ಗಂಗೊಳ್ಳಿ ಠಾಣಾ ಪೊಲೀಸರು ಠಾಣಾ ವ್ಯಾಪ್ತಿಯ ಮರವಂತೆ ಬೀಚ್‌ ಬಳಿ ಓರ್ವ ವ್ಯಕ್ತಿಯನ್ನು ಹಾಗೂ ಕುಂದಾಪುರ ಠಾಣಾ ಪೊಲೀಸರು ಠಾಣಾ ವ್ಯಾಪ್ತಿಯ ಬಳ್ಕೂರು  ಬ್ರಿಡ್ಜ್ ಬಳಿಯ ರಸ್ತೆಯ ಬದಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ಹಾಗೂ ಅವರ‌ ಬಳಿ ಇದ್ದ ಮದ್ಯದ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ. 

ಈ ಘಟನೆಗಳಿಗೆ ಸಂಬಂಧಿಸಿ ಶಂಕರನಾರಾಯಣ, ಗಂಗೊಳ್ಳಿ,  ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ತಲಾ ಒಂದರಂತೆ ಒಟ್ಟು ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!