ಉಡುಪಿ: ಎಂಜಿಎಂ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಳನ ಸಮಾವೇಶ

ಉಡುಪಿ ಮೇ 28(ಉಡುಪಿ ಟೈಮ್ಸ್ ವರದಿ): ಇಲ್ಲಿನ ಎಂಜಿಎಂ ಕಾಲೇಜಿನ 1992ನೇ ಇಸವಿಯ ಕಲಾ ವಿದ್ಯಾರ್ಥಿಗಳು ಮೂವತ್ತೊಂದು ವರುಷಗಳ ಅನಂತರ ಒಂದುಗೂಡಿ ಪುನರ್ ಸ್ನೇಹ ಸಂಮಿಲನ ಸಮಾವೇಶವನ್ನು ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದರು.

ನಿವೃತ್ತ ಹಿರಿಯ ಆಂಗ್ಲ ಪ್ರಾಧ್ಯಾಪಕ ಪ್ರೊ.ಎನ್.ಟಿ.ಭಟ್ಟರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಲಕ್ಷ್ಮಿನಾರಾಯಣ ಕಾರಂತ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 

ಸಭಾ ವೇದಿಕೆಯಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಸ್ಯಾಮ್ ಡೇನಿಯಲ್‌, ನಿವೃತ್ತ ಆಂಗ್ಲ ಭಾಷಾ ಪ್ರಾಧ್ಯಾಪಕಿ ಪ್ರೊ.ಪುಷ್ಪಲತಾ ಸಾಂತ್ಯಾರ, ನಿವೃತ್ತ ಪ್ರಾಂಶುಪಾಲೆ ಪ್ರೊ.ಸಂಧ್ಯಾ ನಂಬಿಯಾರ್, ನಿವೃತ್ತ ಹಿಂದಿ ಪ್ರಾಧ್ಯಾಪಕ  ಡಾ.ಎಸ್.ಆರ್.ಶೇಟ್, ನಿವೃತ್ತ ಗ್ರಂಥಪಾಲಕ ಎಸ್.ಬಾಲು, ನಿವೃತ್ತ ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಹಳೆ  ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಪ್ರೆುಾ.ರೇೂಹಿತ್ ಅಮೀನ್, ದೈಹಿಕ ನಿರ್ದೇಶಕಿ ಜಯಶ್ರೀ ನಾಯಕ್, ನಿವೃತ್ತ ಹಿಂದಿ ಪ್ರಾಧ್ಯಾಪಕಿ ಇಂದುಮತಿ, ಅರ್ಥ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಚೆನ್ನಪುಾಜಾರಿ, ಗೃಹ ವಿಜ್ಞಾನ ಪ್ರಾಧ್ಯಾಪಕಿ ಪೂರ್ಣಿಮಾ ಅಡಿಗ ಇವರಿಗೆ ಗುರುವಂದನೆ ಸಲ್ಲಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ಮನೇೂರಂಜನಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಎಂ.ಜಿ.ಎಂ.ಪ.ಪೂಕಾಲೇಜು ಪ್ರಾಂಶುಪಾಲೆ ಮಾಲತಿದೇವಿ, ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕಿ ಡಾ.ಮಲ್ಲಿಕಾ ಶೆಟ್ಟಿ  ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿಗಳಾದ ವಿಶ್ವನಾಥ್ ಶ್ಯಾನುಭಾಗ್ ಗಾಯತ್ರಿ ಕಾರ್ಯಕ್ರಮ ಸಂಯೇೂಜಿಸಿದರು.ಡಾ.ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!