ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಯ ಮಂಗಳೂರಿನ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು ಮೇ 31 : ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ನಿರಂಜನ್ ಅವರ ಮಂಗಳೂರಿನ ಅಪಾರ್ಟ್ಮೆಮೆಂಟ್ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ಪಂಪ್ವೆಲ್ ನಲ್ಲಿರುವ ನಿರಂಜನ್ ರಿಗೆ ಸೇರಿದ ಅಪಾರ್ಟ್ಮೆಮೆಂಟ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ನಿರಂಜನ್ ಅವರ ಪತ್ನಿಗೆ ಸೇರಿರುವ ಡಯೋಗ್ನಾಸ್ಟಿಕ್ ಲ್ಯಾಬ್ ನಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಅಲ್ಲದೆ ಕುಶಾಲ ನಗರ ಮತ್ತು ಪಿರಿಯಾಪಟ್ಟಣದಲ್ಲಿರುವ ಅವರ ನಿವಾಸಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.