ಕೊಲ್ಲೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಕೊಲ್ಲೂರು ಜೂ.1(ಉಡುಪಿ ಟೈಮ್ಸ್ ವರದಿ) : ಕೆರಾಡಿ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ಸ್ಥಳೀಯ ನಿವಾಸಿ ಶಶಿಕಾಂತ (25) ಆತ್ಮಹತ್ಯೆ ಮಾಡಿಕೊಂಡ ಯುವಕ.‌

ಅಮರ ಶೆಟ್ಟಿ ಅವರು ಕೆರಾಡಿಯಿಂದ ಚಿತ್ತೂರು ಕಡೆಗೆ ಹೋಗುತ್ತಿರುವಾಗ ಕೆರಾಡಿ ಗ್ರಾಮದ ಚಪ್ಪರಮಕ್ಕಿ ಕೂರ್ಕೊಗೆ ಎಂಬಲ್ಲಿನ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಅವರ ಸ್ನೇಹಿತನಾದ ಶಶಿಕಾಂತ್ ಅವರ ಬೈಕ್ ನಿಂತಿರುವುದು ಕಂಡು ಅವರ ಮೊಬೈಲ್ ನಂಬರ್‌ಗೆ ಕರೆ ಮಾಡಿದ್ದಾರೆ. ಆದರೆ  ಶಶಿಕಾಂತ್ ಅವರು ಕರೆ ಸ್ವೀಕರಿಸದ್ದಿದಾಗ ಇತರ ಸ್ನೇಹಿತರಿಗೆ ಕರೆಮಾಡಿ ವಿಚಾರ ತಿಳಿಸಿ ಎಲ್ಲರೂ ಸೇರಿ ಅಭಯಾರಣ್ಯದಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಶಶಿಕಾಂತರ ಮೃತದೇಹ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!