ಮಣಿಪಾಲ: ಗಾಂಜಾ ಸೇವನೆ- ನಾಲ್ವರ ವಿರುದ್ಧ ದೂರು

ಮಣಿಪಾಲ ಜೂ.1(ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ವಿರುದ್ಧ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ರೆಸಿಡೆನ್ಸಿಯೊಂದರ ಸಮೀಪ ಒಡಿಸ್ಸಾ ಮೂಲದ ಸಾತ್ವಿಕ್ ಸಾಹೋ (21) , ಅಸ್ಸಾಮ್ ಮೂಲದ ರಿಶಿರಾಜ್ ಮೊಮಿನ್ (21) ಅಮನ್ ಗೋಗೊಯ್ (21)  ಮತ್ತು ಗುಜರಾತ್ ಮೂಲದ ಅಮನ್ ಕುಮಾರ್ (21) ಎಂಬ ನಾಲ್ವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಇವರ ವಿರುದ್ಧ ಮಣಿಪಾಲ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!