ಉಡುಪಿ: ಕೊಡಚಾದ್ರಿ ಬೆಟ್ಟ ಹತ್ತುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ ಜು.20(ಉಡುಪಿ ಟೈಮ್ಸ್ ವರದಿ):ಕೊಲ್ಲೂರಿನ ಕೊಡಚಾದ್ರಿ ಬೆಟ್ಟ ಹತ್ತುವಾಗ ಅಸ್ವಸ್ಥಗೊಂಡು ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಕೇರಳ ಮೂಲದ ಬಿನು ವಿ(47) ಮೃತಪಟ್ಟವರು. ಇವರು ಜು.17 ರಂದು ಕೇರಳದ ಕೊಲ್ಲಂನಿಂದ ತಮ್ಮ ಸಂಬಂಧಿಯಾದ ಗೋಪ ಕುಮಾರ್ ಜಿ ರವರೊಂದಿಗೆ ಬಂದು ಜು.18 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಮಾಡಿ ಬೆಳಿಗ್ಗೆ ಕೊಡಚಾದ್ರಿ ಬೆಟ್ಟ ಹತ್ತುವಾಗ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ  ಉಡುಪಿ ಆಸ್ಪತ್ರೆಗೆ ಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಬಿನು. ವಿ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಸಂಬಂಧಿ ವಿನೀತ್ ಕುಮಾರ್.ವಿ ಎಂಬವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!