ಆದಿ ಉಡುಪಿ ಹಣ್ಣು ತರಕಾರಿ-ದಿನಸಿ ವರ್ತಕರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ರಾಜೀನಾಮೆ
ಉಡುಪಿ: ಆದಿ ಉಡುಪಿ ಹಣ್ಣು ತರಕಾರಿ ಮತ್ತು ದಿನಸಿ ವರ್ತಕರ ಸಂಘದ ಅಧ್ಯಕ್ಷ ,ಉಪಾಧ್ಯಕ್ಷ ಹಾಗೂ ನಿರ್ದೇಶಕ ರಾಜೀನಾಮೆ ನೀಡಿದ್ದಾರೆ.
ಕಳೆದ ವರ್ಷ ನವೆಂಬರ್ 24 ರಂದು ಆದಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯ ವರ್ತಕರು ಸಂಘವನ್ನು ರಚಿಸಿದ್ದರು.
ಪ್ರಸ್ತುತ ನಡೆದ ಬೆಳವಣಿಗೆಯಲ್ಲಿ ಸಂಘದ ಅಧ್ಯಕ್ಷರಾದ ಕೆ.ಸತೀಶ್ ನಾಯಕ್, ಉಪಾಧ್ಯಕ್ಷ ವಿರೂಪಾಕ್ಷ ಪಾಟೀಲ್ ಹಾಗೂ ನಿರ್ದೇಶಕರಾದ ಪ್ರಭು ಗೌಡ ರಾಜೀನಾಮೆ ಸಲ್ಲಿಸಿದ್ದಾರೆ.ಈ ಮೂವರು ವಿವಿಧ ಕಾರಣ ನೀಡಿ ಸಂಘದ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗೆ ಆದಿ ಉಡುಪಿ ಎಪಿಎಂಸಿ ಯಾರ್ಡ್ನ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿದ್ದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು. ಮಾತ್ರವಲ್ಲದೆ ಎಪಿಎಂಸಿ ಯಾರ್ಡ್ನಲ್ಲಿ ವರ್ತಕರಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಶೌಚಾಲಯಗಳನ್ನು ವ್ಯವಸ್ಥೆ ಮಾಡಿಕೊಡದ ಬಗ್ಗೆ ಇಲ್ಲಿನ ವರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದರು.