ಹೆಬ್ರಿ: ವ್ಯಕ್ತಿ ಆತ್ಮಹತ್ಯೆ

ಹೆಬ್ರಿ ಜು.27(ಉಡುಪಿ ಟೈಮ್ಸ್ ವರದಿ):ಶಿವಪುರ ಗ್ರಾಮದ ಮೇಲ್‌ ಮುಕ್ಕಾಣಿ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರಂಗನಾಥ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡವರು. ಹಿರಿಯಡ್ಕದ ಸೌಹಾರ್ದ ಸೊಸೈಟಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅವರು ಜು.21 ರಂದು ಯಾವುದೋ ಕಾರಣಕ್ಕೆ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಶಿವಪುರ ಗ್ರಾಮದ ಮೇಲ್‌ ಮುಕ್ಕಾಣಿ ಎಂಬಲ್ಲಿರುವ ಸರಕಾರಿ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಮ್ಮ ನೀಡಿದ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!