ಹಿರಿಯಡ್ಕ:ವ್ಯಕ್ತಿ ಆತ್ಮಹತ್ಯೆ
ಹಿರಿಯಡ್ಕ ಜು.31(ಉಡುಪಿ ಟೈಮ್ಸ್ ವರದಿ): ಅಂಜಾರು ಗ್ರಾಮದ ಕೊಡಿಬೆಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ವಾಸು( 62) ಆತ್ಮಹತ್ಯೆ ಮಾಡಿಕೊಂಡವರು. ಇವರು ಜು.27 ರ ಮಧ್ಯಾಹ್ನದಿಂದ ಜು.29 ರ ಮಧ್ಯಾಹ್ನದ ನಡುವಿನ ಅವಧಿಯಲ್ಲಿ ಕೊಡಿಬೆಟ್ಟು ಹಾಲು ಡೈರಿ ಪಕ್ಕದ ಶ್ರೀ ರಾಮ ಕೃಷ್ಣ ಪ್ರಭುರವರ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಮ್ಮ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.