ಬೆಂಗಳೂರು: ಭೂಮಿ ಪೂಜೆ ಸಂದರ್ಭ ವಿದ್ಯುತ್ ಸ್ಪರ್ಶಿಸಿ ನಾಲ್ವರ ಸಾವು

ಬೆಂಗಳೂರು : ಭೂಮಿ ಪೂಜೆಗೆ ಶಾಮಿಯಾನ ಹಾಕುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ನಾಲ್ವರು ಮೃತಪಟ್ಟ ಘಟನೆ ಇಂದು (ಏ.7) ಮಧ್ಯಾಹ್ನ ಬೆಂಗಳೂರಿನ ಆನೇಕಲ್‍ನ ಇಂಡ್ಕಬೆಲೆಯಲ್ಲಿ ನಡೆದಿದೆ. ಆಕಾಶ್ (30), ಮಹದೇವ (35), ವಿಷಕಂಠ (35) ಮತ್ತು ವಿಜಯ್ ಸಿಂಗ್ (30) ಮೃತಪಟ್ಟವರು.
ಅಪಾರ್ಟ್ ಮೆಂಟ್ ನಿರ್ಮಿಸಲು ಭೂಮಿ ಪೂಜೆಗಾಗಿ ಶಾಮಿಯಾನ ಹಾಕಲಾಗುತ್ತಿತ್ತು. ಈ ವೇಳೆ ಕಬ್ಬಿಣದ ಕಂಬ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣನವರ್, ಅಡಿಷನಲ್ ಎಸ್ಪಿ ಲಕ್ಷ್ಮಿ ಗಣೇಶ್, ಅತ್ತಿಬೆಲೆ ಪೊಲೀಸರು ಹಾಗೂ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!